ಸಾಹಿತ್ಯ ವಿಮರ್ಶೆ : ಶುಭ ಸಂದೇಶ
Monday, March 4th, 2013ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಗಳು ವಿಧಾನಸೌಧ ಬೆಂಗಳೂರು ೫೬೦ ೦೦೧ ಸಿಎಂ/ಪಿಎಸ್/೨೬/೧೧ ಶುಭ ಸಂದೇಶ ವಿಶ್ವ ಕನ್ನಡ ಸಮ್ಮೇಳನದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕನ್ನಡ ನಾಡು ಏಕೀಕರಣಗೊಂಡು ೫೫ನೇ ವರ್ಷಕ್ಕೆ ಹೆಜ್ಜೆಯನ್ನಿಟ್ಟಿದೆ. ಈ ಸಂದರ್ಭವನ್ನು ರಚನಾತ್ಮಕವಾಗಿ ದಾಖಲಿಸಿ ಸ್ಮರಣೀಯಗೊಳಿಸಬೇಕೆಂಬುದು ಸರ್ಕಾರದ ಮಹದಾಶಯ. ಅದಕ್ಕಾಗಿ ಬೆಳಗಾವಿಯಲ್ಲಿ “ವಿಶ್ವ ಕನ್ನಡ ಸಮ್ಮೇಳನ”ವನ್ನು ಇದೇ ಮಾರ್ಚ್ ತಿಂಗಳಿನಲ್ಲಿ ಆಯೋಜಿಸಲಾಗಿದೆ. ಇದನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವುದು ಕರ್ನಾಟಕ ಸರ್ಕಾರದ ಆಶಯವಾಗಿದೆ. ಇದರ ಅಂಗವಾಗಿ ನಾಡಿನ ವಿವಿಧ ಕ್ಷೇತ್ರಗಳಲ್ಲಾಗಿರುವ ಪ್ರಗತಿಯ ಆತ್ಮಾವಲೋಕನದ ಜೊತೆಗೆ ಕನ್ನಡ ಸಾಹಿತ್ಯದ ಸೃಜನಶೀಲ [...]



